ಸೋಮವಾರಪೇಟೆ, ಜ.31 : ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಇಲ್ಲಿನ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ಬಹುಮಾನಕ್ಕೆ ಭಾಜನರಾಗಿದ್ದಾರೆ.

1 ರಿಂದ 4ನೇ ತರಗತಿ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕೆ.ಎಸ್. ಸಮೀಕ್ಷ ಪ್ರಥಮ, ಎಸ್. ಸ್ಪಟಿಕ ದ್ವಿತೀಯ, ಪುರಸ್ಕøತಿ ಜಿ. ಶೆಟ್ಟಿ ತೃತೀಯ ಸ್ಥಾನ ಗಳಿಸಿದ್ದಾರೆ. 5 ರಿಂದ 7ನೇ ತರಗತಿ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕೆ.ಎಸ್. ಸುದೀಕ್ಷ ಪ್ರಥಮ, ಡಿ.ಎಲ್. ತಾಜ್ಯ ದ್ವಿತೀಯ, 5 ರಿಂದ 7ನೇ ತರಗತಿ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಶ್ರೇಯಾ ರವೀಂದ್ರ ದ್ವಿತೀಯ, ಪ್ರೌಢಶಾಲೆ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಎಸ್. ಸುಧನ್ವ ದ್ವಿತೀಯ ಸ್ಥಾನ ಗಳಿಸಿದ್ದಾರೆ.