ಮಡಿಕೇರಿ, ಫೆ.2: ಜಿಲ್ಲಾ ಪಂಚಾಯತ್ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯು ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಿ.ಪಂ. ಉಪಾಧ್ಯಕ್ಷರು ಹಾಗೂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಮಿತಿ ಸದಸ್ಯರಾದ ಎಚ್.ಆರ್.ಶ್ರೀನಿವಾಸ, ಅಚ್ಚಪಂಡ ಎಂ.ಮಹೇಶ್ ಗಣಪತಿ, ಯಾಲದಾಳು ಡಿ.ಪದ್ಮಾವತಿ, ಎಂ.ಬಿ.ಸುನೀತಾ, ಸಿ.ಪಿ.ಪುಟ್ಟರಾಜು, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಉಪಕಾರ್ಯದರ್ಶಿ ಗುಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.