ವೀರಾಜಪೇಟೆ, ಫೆ. 20: ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ಭಾರತ ಸೇವಾದಳದ ರಾಜ್ಯಮಟ್ಟದ ಮಕ್ಕಳ ಭಾವೈಕ್ಯತಾ ಮೇಳದಲ್ಲಿ ವೀರಾಜಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪಿ.ಎ. ಪ್ರವೀಣ್ ಹಾಗೂ ಶಿಕ್ಷಕಿ ಸ್ವಾತಿ ಅವರು ಸಲ್ಲಿಸಿದ ಸೇವೆಗಾಗಿ ಉತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.