ಸೋಮವಾರಪೇಟೆ, ಫೆ. 23: ಅಮೇರಿಕಾದಲ್ಲಿ ನಡೆಯುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ ಬೆಂಗಳೂರು ಶಾರದಾ ಪ್ರತಿಷ್ಠಾನದ ಅಧ್ಯಕ್ಷ, ಹಿರಿಯ ಸಾಹಿತಿ ಹುಲಿವಾನ ನರಸಿಂಹಸ್ವಾಮಿ ಅವರನ್ನು ಸಮೀಪದ ಶಾಂತಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಕೃತಿ ಸಾಹಿತ್ಯ ಬಳಗದ ವತಿಯಿಂದ ಸನ್ಮಾನಿಸಲಾಯಿತು.

ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದ ಆಶ್ರಯದಲ್ಲಿ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ಕೇಶವ ವೇದಿಕೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನರಸಿಂಹಸ್ವಾಮಿ ಅವರನ್ನು ಸನ್ಮಾನಿಸಿ ಬಳಗದ ವತಿಯಿಂದ ‘ಅಕ್ಷರ ಬ್ರಹ್ಮ’ ಎಂಬ ಬಿರುದನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ವಹಿಸಿದ್ದರು. ಈ ಸಂದರ್ಭ ನಿವೃತ್ತ ಸೈನಿಕ ಹೆಚ್.ಪಿ. ಪ್ರೇಮ್‍ಕುಮಾರ್, ಶಾಂತಳ್ಳಿ ಪಿಎಸಿಎಸ್ ನಿರ್ದೇಶಕರಾದ ಕೆ.ಟಿ. ದಿನೇಶ್, ರಾಜೇಶ್, ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಕೆ. ಗೋಪಾಲ್, ಪ್ರಕೃತಿ ಸಾಹಿತ್ಯ ಬಳಗದ ಅಧ್ಯಕ್ಷೆ ರಾಧಿಕ ಕಾಳಪ್ಪ, ಪ್ರಮುಖರಾದ ಜಯಂತಿ ಹೆಗ್ಗಡೆ, ದರ್ಶಿನಿ ಹೇಮಂತ್, ಮಧುಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.