ಮಡಿಕೇರಿ, ಫೆ. 24 : ತೀತಿಮಾಡ ಅರ್ಜುನ್ ದೇವಯ್ಯ, ತೇಜಸ್ವಿನಿ ಶರ್ಮ ಮುಖ್ಯ ಪಾತ್ರದಲ್ಲಿರುವ ಕೊಡಗ್ರ ಸಿಪಾಯಿ ಕೊಡವ ಭಾಷಾ ಚಲನಚಿತ್ರ ಬೆಂಗಳೂರಿನಲ್ಲಿ ಆಯೋಜಿತ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಬೆಂಗಳೂರಿನಲ್ಲಿ ತಾ. 26 ರಿಂದ ಮಾರ್ಚ್ 4 ರವರೆಗೆ ಆಯೋಜಿತ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ಆಯ್ಕೆಯಾಗಿದೆ. ಚಿತ್ರೋತ್ಸವಕ್ಕೆ 220 ಕ್ಕೂ ಅಧಿಕ ಚಿತ್ರಗಳು ಪ್ರದರ್ಶನಕ್ಕಾಗಿ ಅರ್ಜಿ ಸಲ್ಲಿಸಿದ್ದವು. ಈ ಪೈಕಿ 1.05 ಗಂಟೆ ಅವಧಿಯ ಕೊಡಗ್ರ ಸಿಪಾಯಿ ಸೇರಿದಂತೆ 25 ಚಿತ್ರಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಕಳೆದ ಡಿಸೆಂಬರ್ನಲ್ಲಿ ಕೊಡವರ ಸಿಪಾಯಿ ಕೊಲ್ಕೋತ್ತದಲ್ಲಿ ನಡೆದ ಅಂತರರಾಷ್ಟ್ರೀಯ ಸಿನಿ ಉತ್ಸವದಲ್ಲಿಯೂ ಪ್ರದರ್ಶನ ಕಂಡಿತ್ತು. ಉಳುವಂಗಡ ಕಾವೇರಿ ಚಿತ್ರಕಥೆ ಬರೆದಿರುವ ಕೊಡಗ್ರ ಸಿಪಾಯಿಗೆ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನವಿದೆ.