ಮಡಿಕೇರಿ, ಜ. 25: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಡಗು ಶಾಖೆಯ ವತಿಯಿಂದ ರೆಡ್‍ಕ್ರಾಸ್ ಜಿಲ್ಲಾ ಘಟಕದ ನೂತನ ಕಟ್ಟಡ ಸಂಕೀರ್ಣಕ್ಕೆ ಭೂಮಿ ಪೂಜೆ ಕಾರ್ಯಕ್ರಮವು ತಾ. 27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸ್ಟೀವರ್ಟ್ ಹಿಲ್‍ನಲ್ಲಿ ನಡೆಯಲಿದೆ.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ರೆಡ್ ಕ್ರಾಸ್ ರಾಜ್ಯ ಸಭಾಪತಿ ನಾಗಣ್ಣ, ಮಾಜಿ ಸಚಿವ ಯಂ.ಸಿ.ನಾಣಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ. ಲಕ್ಷ್ಮೀಪ್ರಿಯಾ, ನಗರಸಭೆ ಪೌರಾಯುಕ್ತ ಎಂ.ಎಲ್. ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಕೆ.ಬಿ. ಕಾರ್ಯಪ್ಪ, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ರೆಡ್ ಕ್ರಾಸ್‍ನ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಮುರಳೀಧರ ಇತರರು ಪಾಲ್ಗೊಳ್ಳಲಿದ್ದಾರೆ.