ಸೋಮವಾರಪೇಟೆ, ಫೆ. 25 : ಇಲ್ಲಿನ ಭುವನಮಂದಾರ ರೈತ ಉತ್ಪಾದಕರ ಕಂಪೆನಿಯ 2018-19ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ತಾ. 27ರಂದು ಬೆಳಿಗ್ಗೆ 11ಕ್ಕೆ ಸಫಾಲಿ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಎನ್.ಬಿ. ಪೂಜಾಶ್ರೀ ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಕಂಪೆನಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ನಬಾರ್ಡ್ ಬ್ಯಾಂಕ್ ಡಿ.ಡಿ.ಎಂ. ಶ್ರೀನಿವಾಸ್, ಓಡಿಪಿ ಸಂಸ್ಥೆಯ ನಿರ್ದೇಶಕ ಅಲೆಕ್ಸ್ ಪ್ರಶಾಂತ್ ಸಿಕ್ವೇರ ಭಾಗವಹಿಸಲಿದ್ದಾರೆ.