ಕೂಡಿಗೆ, ಫೆ. 25 : ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಮತ್ತು ಬಯಲು ಬಸವೇಶ್ವರ ದೇವಾಲಯ ಸಮಿತಿಯ ವತಿಯಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರಿಗೆ ಮನವಿ ಮಾಡಲಾಯಿತು.

ಶಾಸಕರು ಕಾರ್ಯಕ್ರಮ ನಿಮಿತ್ತ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಬಡಾವಣೆಗೆ ಆಗಮಿಸಿದ ಸಂದರ್ಭ ಬಯಲು ಬಸವೇಶ್ವರ ದೇವಾಲಯಕ್ಕೆ ತೆರಳುವ ರಸ್ತೆ, ಚರಂಡಿ ಮತ್ತು ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಬೇಕೆಂದು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಶಾಸಕರು ಶೀಘ್ರವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಬಯಲು ಬಸವೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಬಿ.ಕೆ.ಸುದೀಪ್, ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಮೊಣ್ಣಪ್ಪ, ಸದಸ್ಯರಾದ ಮಂಜಪ್ಪ, ಲಕ್ಷ್ಮಣ್, ಸುರೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.