ಸಿದ್ದಾಪುರ, ಫೆ. 25: ಸಿದ್ದಾಪುರ ಪೊಲೀಸ್ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಭೇಟಿ ನೀಡಿದರು. ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು ಸಿದ್ದಾಪುರದಲ್ಲಿ ಇರುವ ಪೊಲೀಸ್ ವಸತಿ ಗೃಹಗಳ ಪೈಕಿ ಸಂಪೂರ್ಣವಾಗಿ ಹಾನಿ ಗೊಂಡಿರುವ ವಸತಿ ಗೃಹಗಳನ್ನು ನೆಲಸಮಗೊಳಿಸಿ ಹೊಸ ವಸತಿ ಗೃಹಗಳನ್ನು ನಿರ್ಮಾಣ ಮಾಡಬೇಕಾಗಿದ್ದು; ಸರ್ಕಾರದಿಂದ ಅನುದಾನ ಬಂದಲ್ಲಿ ಹಂತಹಂತವಾಗಿ ವಸತಿ ಗೃಹಗಳನ್ನು ನಿರ್ಮಾಣ ಮಾಡುವ ಯೋಜನೆಯನ್ನು ರೂಪಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭ ಮಡಿಕೇರಿ ಡಿ.ವೈ.ಎಸ್.ಪಿ. ಬಾರಿಕೆ ದಿನೇಶ್ ಕುಮಾರ್, ಮಡಿಕೇರಿ ಪಟ್ಟಣ ನಿರೀಕ್ಷಕ ಅನೂಪ್ ಮಾದಪ್ಪ, ಸಿದ್ದಾಪುರ ಠಾಣಾಧಿಕಾರಿ ಹೆಚ್.ಎಸ್. ಬೋಜಪ್ಪ ಹಾಗೂ ಸಹಾಯಕ ಠಾಣಾಧಿಕಾರಿಗಳು ಹಾಜರಿದ್ದರು.