ಸುಂಟಿಕೊಪ್ಪ,ಫೆ.25: ಸುಂಟಿಕೊಪ್ಪ 2ನೇ ವಿಭಾಗದ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನದಡಿಯಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಏರ್ಪಾಡಿಸಲಾಗಿತ್ತು.

ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ಚಂದ್ರೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಬಡಜನತೆಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಹತ್ತು ಹಲವು ಯೋಜನೆಗಳನ್ನು ಸರಕಾರವು ಜಾರಿಗೆ ತಂದಿದ್ದು ಇದರ ಸದುಪಯೋಗವನ್ನು ಸಕಾಲದಲ್ಲಿ ಪಡೆದುಕೊಳ್ಳುವಂತೆ ಕರೆ ನೀಡಿದರು. ಜೆಸ್ಸಿ ಡಿಸೋಜಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಾಲವಿಕಾಸ ಸಮಿತಿಯ ಅಧ್ಯಕ್ಷ ಬಿ.ಆರ್.ಪೂರ್ಣಿಮಾ ಹಾಗೂ ಸಮಿತಿಯ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಇದ್ದರು. ಬಿ.ಜಿ.ಗೀತಾ ಅವರು ಪ್ರಾರ್ಥಿಸಿ, ಪಿ.ವಿಜಯ ಸ್ವಾಗತಿಸಿ, ಎಂ.ಈ.ಶೋಭ ವಂದಿಸಿದರು.