ಕುಶಾಲನಗರ, ಫೆ. 29: ಕುಶಾಲನಗರದ ಮಹಿಳಾ ವಿವಿಧೋ ದ್ದೇಶ ಸಹಕಾರ ಸಂಘ ವಾರ್ಷಿ ಕೋತ್ಸವ ಕಾರ್ಯಕ್ರಮ ನಡೆಯಿತು. ಸಮಾಜದ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷೆ ಸಲೀನ ಉದ್ಘಾಟಿಸಿದರು. ವಾರ್ಷಿ ಕೋತ್ಸವ ಅಂಗವಾಗಿ ಸಮಾಜದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಛದ್ಮವೇಷ, ನೃತ್ಯ ಕಾರ್ಯಕ್ರಮ ನಡೆಯಿತು. ಸಮಾಜಕ್ಕೆ ಸಹಕಾರ ನೀಡಿದ ದಾನಿಗಳಾದ ಬಾಲಕೃಷ್ಣ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ನಡೆದ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತ ರಾದವರಿಗೆ ಬಹುಮಾನ ವಿತರಣೆ ನಡೆಯಿತು. ಮುಖ್ಯ ಅತಿಥಿ ಗಳಾಗಿ ಕುಶಾಲನಗರ ಪೊಲೀಸ್ ಠಾಣೆ ಸಹಾಯಕ ಠಾಣಾಧಿಕಾರಿ ಗೀತಾ ಪಾಲ್ಗೊಂಡಿ ದ್ದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು, ಕಾರ್ಯ ದರ್ಶಿ, ವಿದ್ಯಾರ್ಥಿಗಳ ಪೋಷಕರು ಇದ್ದರು.