ಮಡಿಕೇರಿ, ಮಾ. 5: ಶಾಲಾ ಶೈಕ್ಷಣಿಕ ಪ್ರವಾಸ ಹಾಗೂ ಹೊರ ಸಂಚಾರವನ್ನು ಡಿಸೆಂಬರ್ ಅಂತ್ಯದೊಳಗೆ ಮುಗಿಸಬೇಕಾಗಿದೆ. ಈಗ ಶಾಲೆಗಳಲ್ಲಿ ಪರೀಕ್ಷಾ ಸಮಯವಾಗಿದ್ದು, ವಿದ್ಯಾರ್ಥಿಗಳಿಗೆ ಪ್ರವಾಸ, ಶೈಕ್ಷಣಿಕ ಪ್ರವಾಸ ಹೋಗಲು ಇಲಾಖೆ ಅನುಮತಿ ನೀಡುತ್ತಿಲ್ಲ ಎಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕ ಪಿ.ಎಸ್. ಮಚ್ಚಡೊ ಸ್ಪಷ್ಟಪಡಿಸಿದ್ದಾರೆ.

ತಾ. 4 ರಂದು ಕುಶಾಲನಗರದ ಬಳಿಯ ದುಬಾರೆಯಲ್ಲಿ ಪ್ರವಾಸ ತೆರಳಿರುವ ಬಗ್ಗೆ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆದಿರುವುದಿಲ್ಲ. ವಿದ್ಯಾರ್ಥಿಗಳ ಸಾವಿಗೆ ಇಲಾಖೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯಸ್ಥರು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಮತ್ತು ಹೊರ ಸಂಚಾರಕ್ಕಾಗಲಿ ಕಳುಹಿಸದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.