ಸೋಮವಾರಪೇಟೆ, ಮಾ. 6: ರಾಜ್ಯಮಟ್ಟದ ಯುವ ಪ್ರಶಸ್ತಿಗೆ ಸೋಮವಾರಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಚಂದ್ರಿಕಾ ಆಯ್ಕೆಗೊಂಡು, ಪುತ್ತೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪುತ್ತೂರಿನ ಶಿವರಾಮಕಾರಂತ ಬಾಲಭವನ ಅಭಿವೃದ್ಧಿ ಸಮಿತಿ, ಸಹಾಯಕ ಆಯುಕ್ತರ ಕಚೇರಿ, ತಾಲೂಕು ಪತ್ರಕರ್ತರ ಸಂಘ, ತಾಲೂಕು ಯುವ ಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ ಸಹಕಾರದಲ್ಲಿ, ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ನೀಡಲಾಗುವ ‘ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ’ಯನ್ನು ಚಂದ್ರಿಕಾ ಅವರಿಗೆ ನೀಡಿ ಗೌರವಿಸಲಾಯಿತು.

ಪುತ್ತೂರಿನ ಬಾಲಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಪ್ರಶಸ್ತಿ ಪ್ರದಾನ ಮಾಡಿದರು.