ಬೆಂಗಳೂರು, ಮಾ. 10 : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಇಂದು ಕೊರೊನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಹಲವು ದೇಶಗಳನ್ನು ಬಾಧಿಸಿರುವ ನೊವೆಲ್ ಕರೋನಾ ಬೆಂಗಳೂರು, ಮಾ. 10 : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಇಂದು ಕೊರೊನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಹಲವು ದೇಶಗಳನ್ನು ಬಾಧಿಸಿರುವ ನೊವೆಲ್ ಕರೋನಾ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ರಾಜ್ಯದಲ್ಲಿ ಈ ಸೋಂಕು ಹರಡುವ ಸಾಧ್ಯತೆಯನ್ನು ತಡೆಗಟ್ಟಲು ನಮ್ಮ ಸರ್ಕಾರ ಎಲ್ಲಾ ರೀತಿಯ ಮುನ್ನೆ ಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ ಎಂದರು.ಈವರೆಗೆ ಕೊರೊನಾ ವೈರಸ್ ಸೋಂಕು ಇರುವ ದೇಶಗಳಿಂದ ಪ್ರಯಾಣಿಸಿರುವ ಹಾಗೂ ಸೋಂಕಿತರ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ರಾಜ್ಯದಲ್ಲಿ ಈ ಸೋಂಕು ಹರಡುವ ಸಾಧ್ಯತೆಯನ್ನು ತಡೆಗಟ್ಟಲು ನಮ್ಮ ಸರ್ಕಾರ ಎಲ್ಲಾ ರೀತಿಯ ಮುನ್ನೆ ಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ ಎಂದರು.
ಈವರೆಗೆ ಕೊರೊನಾ ವೈರಸ್ ಸೋಂಕು ಇರುವ ದೇಶಗಳಿಂದ ಪ್ರಯಾಣಿಸಿರುವ ಹಾಗೂ ಸೋಂಕಿತರ ಚೇತರಿಸಿಕೊಂಡಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಸೋಂಕು ತಗುಲಿರುವುದು ಖಚಿತ ಪಟ್ಟಿದೆ ಎಂದು ತಿಳಿಸಿದರು.
ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಬೆಂಗಳೂರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಹಾಗೂ ಕಾರವಾರ ಕಡಲ ಬಂದರು ಗಳಲ್ಲಿ ಸುಮಾರು 95 ಸಾವಿರಕ್ಕೂ ಹೆಚ್ಚು ಪ್ರಯಾಣಿಕರ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ಕಟ್ಟುನಿಟ್ಟಾಗಿ ನಡೆಸುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮುನ್ನೆಚ್ಚರಿಕೆಯ ಕ್ರಮವಾಗಿ ಬೆಂಗಳೂರು
(ಮೊದಲ ಪುಟದಿಂದ) ನಗರ ಮತ್ತು ಗ್ರಾಮಾಂತರ ಜಿಲ್ಲೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿಶುವಿಹಾರ, ಎಲ್.ಕೆ.ಜಿ, ಯು.ಕೆ.ಜಿ ಶಾಲೆಗಳು, ಅಂಗನವಾಡಿಗಳಿಗೂ ರಜೆ ಘೋಷಿಸಲಾಗಿದೆ. ಪ್ರತಿ ದಿನ ವೈದ್ಯಕೀಯ ಶಿಕ್ಷಣ ಸಚಿವರು, ಆರೋಗ್ಯ ಸಚಿವರು ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್ಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಬೆಂಗಳೂರು ಘಟಕ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ರಕ್ತ ಪರೀಕ್ಷೆಯ ಸೌಲಭ್ಯ ಕಲ್ಪಿಸಲಾಗಿದೆ. ಮೈಸೂರು, ಹಾಸನ ಹಾಗೂ ಶಿವಮೊಗ್ಗ ಮೆಡಿಕಲ್ ಕಾಲೇಜುಗಳ ಪ್ರಯೋಗಾಲಯಗಳಲ್ಲಿ ಸೋಂಕು ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತರ ಚಿಕಿತ್ಸೆಗೆ 700 ಹಾಸಿಗೆಗಳನ್ನು ಗುರುತಿಸಲಾಗಿದೆ. 600-700 ಜನರ ತಾತ್ಕಾಲಿಕ ಕ್ವಾರಂಟೈನ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.