ನಾಪೆÇೀಕ್ಲು, ಮಾ. 9: ಸಮೀಪದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವವು ವಿಜೃಂಭಣೆಯಿಂದ ನೆರವೇರಿತು. ಸೋಮವಾರ ಬೆಳಿಗ್ಗೆ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೆÇೀರಾಟ ಮತ್ತು ಬಲಿವಾಡುವಿನ ಆಗಮನದಿಂದ ದೇವಳದಲ್ಲಿ ಉತ್ಸವ ಆರಂಭಗೊಂಡಿತು. ಅದರೊಂದಿಗೆ ಇನ್ನಿತರ ತಕ್ಕಮುಖ್ಯಸ್ಥರ ಎತ್ತುಪೆÇೀರಾಟ, ಸೇವೆಗಳೂ ಸಂಪ್ರದಾಯದಂತೆ ನಡೆಯಿತು. ನಂತರ ಭಕ್ತರ ತುಲಾಭಾರ ಸೇವೆಗಳು, ಮಧ್ಯಾಹ್ನದ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ ಇಗ್ಗುತ್ತಪ್ಪ ದೇವರ ಉತ್ಸವ ಮೂರ್ತಿ ದರ್ಶನ ಬಳಿಕ ಮೂರು ಕಿ.ಮೀ. ದೂರದ ಆದಿ ಸ್ಥಳ ಮಲ್ಮ ಬೆಟ್ಟಕ್ಕೆ ಉತ್ಸವ ಮೂರ್ತಿಯೊಂದಿಗೆ ತಕ್ಕ ಮುಖ್ಯಸ್ಥರು, ಭಕ್ತಾದಿಗಳು (ಮೊದಲ ಪುಟದಿಂದ) ವಾದ್ಯಗೋಷ್ಠಿಯೊಂದಿಗೆ ತೆರಳಿದರು. ಈ ಸಂದರ್ಭ ಸಮೀಪದ ನೆಲಜಿ ಇಗ್ಗುತ್ತಪ್ಪ ದೇವಾಲಯದ ತಕ್ಕಮುಖ್ಯಸ್ಥರು, ಹಾಗೂ ಪೇರೂರು ಇಗ್ಗುತ್ತಪ್ಪ ದೇವಾಲಯದ ತಕ್ಕಮುಖ್ಯಸ್ಥರು, ಭಕ್ತಾದಿಗಳು ಎತ್ತಪೆÇೀರಾಟದೊಂದಿಗೆ ಮಲ್ಮ ಬೆಟ್ಟದಲ್ಲಿ ಹಾಜರಿದ್ದರು. ಮೂರು ಇಗ್ಗುತ್ತಪ್ಪ ದೇವಾಲಯಗಳ ತಕ್ಕ ಮುಖ್ಯಸ್ಥರ ಉಪಸ್ಥಿತಿಯಲ್ಲಿ ದೈವಿಕ ವಿಧಿವಿಧಾನಗಳನ್ನು ನೆರವೇರಿಸಿ ದೇವ ಕಟ್ಟನ್ನು ಹಿಂತೆಗೆಯಲಾಯಿತು. ಬಳಿಕ ನೈವೇಧ್ಯ ಸೇರಿದಂತೆ ವಿವಿಧ ಪೂಜೆ, ಬಲಿ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಉತ್ಸವ ಮೂರ್ತಿಯ ಆಕರ್ಷಕ ನೃತ್ಯೋತ್ಸವದೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ದೈವಿಕ ವಿಧಿವಿಧಾನಗಳನ್ನು ವೇದÀ ಮೂರ್ತಿಗಳಾದ ಕುಶ ಭಟ್, ದೇವಿ ಪ್ರಸಾದ್, ಶ್ರೀಕಾಂತ್ ಹೆಬ್ಬಾರ್, ಮತ್ತಿತರರು ನೆರವೇರಿಸಿದರು. ಈ ಸಂದರ್ಭ ದೇವಳಕ್ಕೆ ಸಂಬಂಧಿಸಿದ ಎಲ್ಲಾ ತಕ್ಕಮುಖ್ಯಸ್ಥರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಭಕ್ತ ಜನಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಹಾಜರಿದ್ದರು.
ಪಾಡಿ ಶ್ರೀ ಇಗ್ಗುತ್ತಪ್ಪ ದೇವಳದಲ್ಲಿ ನಡೆದಂತೆ ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಳದಲ್ಲಿಯೂ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಭಕ್ತರು ತಲಾಭಾರ ಸೇವೆ ಸೇರಿದಂತೆ ಮಹಾಪೂಜೆ ಮತ್ತಿತರ ಸೇವೆಗಳನ್ನು ನೆರವೇರಿಸಿದರು. ಮಧ್ಯಾಹ್ನ ಅನ್ನ ಸಂತರ್ಪಣೆಯ ಬಳಿಕ ದೇವರ ಬಲಿ, ನೃತ್ಯ ಬಲಿ ನಡೆಯಿತು. ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಸೇರಿದಂತೆ ಹೆಚ್ಚಿನ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ದೈವಿಕ ವಿಧಿವಿಧಾನಗಳನ್ನು ವೇದ ಮೂರ್ತಿಗಳಾದ ಸಂತೋಷ್ ಹೆಬ್ಬಾರ್, ರಮೇಶ್ ಶರ್ಮ, ಸುರೇಶ್ ಶರ್ಮ ಮತ್ತಿತರರು ನೆರವೇರಿಸಿದರು.