ಕುಶಾಲನಗರ, ಮಾ. 11: ನದಿ, ಪರಿಸರಗಳು ನಾಶಗೊಂಡಲ್ಲಿ ಸಂಸ್ಕøತಿಯ ಅವನತಿ ಎದುರಾಗಲಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಹುಣ್ಣಿಮೆ ಅಂಗವಾಗಿ ನದಿಗೆ 104ನೇ ತಿಂಗಳ ಮಹಾ ಆರತಿ ಬೆಳಗುವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು.
ಪ್ರಕೃತಿ, ಪರಿಸರ, ನದಿ ಮೂಲಗಳನ್ನು ಆರಾಧಿಸುವ ಮೂಲಕ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದ ಅವರು, ನಿರಂತರ ಅರಿವು, ಜಾಗೃತಿ ಮೂಲಕ ಜನರಲ್ಲಿ ಪ್ರಜ್ಞೆ ಮೂಡಿಸಬೇಕಾಗಿದೆ. ನದಿಯನ್ನು ಕಲುಷಿತಗೊಳಿಸುವ ಮನಸ್ಥಿತಿ ಬದಲಾಯಿಸುವು ದರೊಂದಿಗೆ ಉತ್ತಮ ಪರಿಸರ ನಿರ್ಮಾಣ ಮಾಡುವಲ್ಲಿ ಜನರ ಪಾತ್ರ ಮಹತ್ವದ್ದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪಟ್ಟಣ ಪಂಚಾಯಿತಿ ಸದಸ್ಯ ಜಯವರ್ಧನ್ ಮಾತನಾಡಿ, ಜಲಮೂಲಗಳ ರಕ್ಷಣೆಗಾಗಿ ಶ್ರಮಿಸುತ್ತಿರುವ ಕಾವೇರಿ ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪಂಚಾಯಿತಿ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುವು ದಾಗಿ ಭರವಸೆ ವ್ಯಕ್ತಪಡಿಸಿದರು.
ಆರತಿ ಕಾರ್ಯಕ್ರಮದ ಅಂಗವಾಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಪೂಜಾ ವಿಧಿ ನೆರವೇರಿಸಿದರು. ಅಷ್ಟೋತ್ತರ, ಮಹಾಮಂಗಳಾರತಿ ಬಳಿಕ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು.
ಈ ಸಂದರ್ಭ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಕಾವೇರಿ ರಿವರ್ ಸೇವಾ ಟ್ರಸ್ಟ್ನ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಉಪಾಧ್ಯಕ್ಷ ಡಿ.ಆರ್. ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಮಂಡೇಪಂಡ ಬೋಸ್ ಮೊಣ್ಣಪ್ಪ, ಎಂ.ಬಿ. ಜೋಯಪ್ಪ, ಸೋಮಶೇಖರ್ ಶಾಸ್ತ್ರಿ, ಕಾವೇರಿ ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ತೋರೇರ ಉದಯಕುಮಾರ್, ಮಹಿಳಾ ಭಜನಾ ಮಂಡಳಿ ಸದಸ್ಯರು, ಆರತಿ ಬಳಗದ ಪ್ರಮುಖರು ಇದ್ದರು.
ಕುಶಾಲನಗರ ಕೊಪ್ಪ ಬಳಿಯ ಕಾವೇರಿ ಪ್ರತಿಮೆಗೆ ಹುಣ್ಣಿಮೆ ಅಂಗವಾಗಿ ಅಭಿಷೇಕ, ಅರ್ಚನೆ ಕಾರ್ಯಕ್ರಮಗಳು ಜರುಗಿದವು. ಬಾರವಿ ಕನ್ನಡ ಸಂಘ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್ ಮತ್ತಿತರರು ಇದ್ದರು.
ಪೂಜಾ ಕಾರ್ಯಕ್ರಮ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಕುಶಾಲನಗರ ಸಾಯಿ ಮಂದಿರದಲ್ಲಿ ಹುಣ್ಣಿಮೆ ಅಂಗವಾಗಿ ಸಾಯಿ ದೇವರಿಗೆ ಆರತಿ ಕಾರ್ಯಕ್ರಮ, ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ ನೆರವೇರಿಸಲಾಯಿತು. ಸ್ಥಳೀಯ ಅಯ್ಯಪ್ಪಸ್ವಾಮಿ ದೇವಾಲಯ ದಲ್ಲಿ ಹುಣ್ಣಿಮೆ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜರುಗಿತು.