ಸಿದ್ದಾಪುರ, ಮಾ. 13: ನೆಲ್ಲಿಹುದಿಕೇರಿಯ ಶ್ರೀ ಸತ್ಯನಾರಾಯಣ ದೇವಾಲಯದ ವಾರ್ಷಿಕೋತ್ಸವ ತಾ. 19 ರಿಂದ 21 ರವರೆಗೆ ನಡೆಯಲಿದೆ. ತಾ. 19 ರಂದು ಪ್ರಾತಃಕಾಲ 6.30 ರಿಂದ ಗಣಹೋಮ, ನಂತರ ಸಂಜೆ 6.30ಕ್ಕೆ ತಕ್ಕರ ಮನೆಯಿಂದ ಭಂಡಾರ ಇಳಿಸುವುದು. 7 ಗಂಟೆಗೆ ಶುದ್ಧ ಕಲಶ ದೇವರ ಬಳಿ ಬರುವುದು, ಅನ್ನಸಂತರ್ಪಣೆ ನಡೆಯಲಿದೆ. ತಾ. 20 ರಂದು ಬೆಳಿಗ್ಗೆ 10.30ಕ್ಕೆ ಸಾಮೂಹಿಕ ಆಶ್ಲೇಷ ಬಲಿ, ಮಧ್ಯಾಹ್ನ 12.30ಕ್ಕೆ ಮಹಾ ಪೂಜೆ, ಪಟ್ಟಣಿ, ಶ್ರೀ ಪೊದಮ್ಮ ದೇವಸ್ಥಾನದಲ್ಲಿ ಸಂಜೆ 5 ಗಂಟೆಗೆ ಅಕ್ಕಿಹೇರುವುದು, ದೇವರ ಮೆರವಣಿಗೆ ಮತ್ತು ಮಹಾಪೂಜೆ, ಮಂಗಳಾರತಿ ನಂತರ ಶ್ರೀ ಸತ್ಯನಾರಾಯಣ ದೇವಸ್ಥಾನದಲ್ಲಿ ದೇವರ ಮೆರವಣಿಗೆ, ಮಂಗಳಾರತಿ, ಅನ್ನಸಂತರ್ಪಣೆ. ತಾ. 21 ರಂದು 9.30 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ, 1.30 ಗಂಟೆಗೆ ಮಹಾಪೂಜೆ, 2 ಗಂಟೆಗೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ತೆಂಗಿನಕಾಯಿಗೆ ಗುಂಡು ಹೊಡೆಯುವುದು, 5 ಗಂಟೆಗೆ ದೇವರು ಜಳಕಕ್ಕೆ ಹೊರಡುವುದು, ಸಂಜೆ 7.30 ಗಂಟೆಗೆ ದೇವರ ಪ್ರದಕ್ಷಿಣೆ, ರಾತ್ರಿ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ, ನಂತರ ದೇವಸ್ಥಾನದಿಂದ ಭಂಡಾರವನ್ನು ತಕ್ಕರ ಮನೆಗೆ ತಲುಪಿಸುವುದು. ತಾ. 22 ರಂದು ಬೆಳಿಗ್ಗೆ 10.30 ಗಂಟೆಗೆ ಶುದ್ಧ ಕಲಶ, ಮಹಾಪೂಜೆ, ಮಧ್ಯಾಹ್ನ 1 ಗಂಟೆಗೆ ಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆ.