ಮಡಿಕೇರಿ, ಮಾ. 17: ಮಹಾಮಾರಿಯಾಗಿ ವ್ಯಾಪಿಸುತ್ತಿರುವ ಕೊರೊನಾ ವೈರಸ್ ತೊಲಗಲೆಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾ ದಳದ ವತಿಯಿಂದ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಗರದ ಚೌಡೇಶ್ವರಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಸೀದಿ ಹಾಗೂ ಚರ್ಚ್‍ನಲ್ಲಿಯೂ ಕೂಡ ಪ್ರಾರ್ಥನೆ ಮಾಡಲಾಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.