ಸೋಮವಾರಪೇಟೆ, ಮಾ. 31: ಸಾರ್ವಜನಿಕ ಸೇವೆಯಲ್ಲಿರುವ ವಿವಿಧ ಇಲಾಖಾಧಿಕಾರಿಗಳಿಗೆ ಶಾಸಕ ಅಪ್ಪಚ್ಚುರಂಜನ್ ಅವರು ಮಾಸ್ಕ್ ವಿತರಿಸಿದರು.
ತಹಶೀಲ್ದಾರ್ ಗೋವಿಂದರಾಜು, ಡಿವೈಎಸ್ಪಿ ಶೈಲೇಂದ್ರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನಿಲ್, ಎಡಿಎಲ್ಆರ್ ವಿರೂಪಾಕ್ಷ, ಅಬಕಾರಿ ನಿರೀಕ್ಷಕ ಶಿವಪ್ಪ ಸೇರಿದಂತೆ ಇತರ ಅಧಿಕಾರಿಗಳಿಗೆ ಮಾಸ್ಕ್ ವಿತರಿಸಿ, ಅಧಿಕಾರಿಗಳು ಸಾರ್ವಜನಿಕರೊಂದಿಗೆ ಓಡಾಡುವ ಸಂದರ್ಭ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿಕೊಳ್ಳಬೇಕು ಎಂದು ಕಿವಿಮಾತು ನುಡಿದರು.