ಗೋಣಿಕೊಪ್ಪ ವರದಿ, ಮಾ. 31: ಕೊರೊನಾ ಹರಡದಂತೆ ತಿತಿಮತಿ ಗ್ರಾಮ ಪಂಚಾಯಿತಿ ವತಿಯಿಂದ ತಿತಿಮತಿ ಪಟ್ಟಣದಲ್ಲಿ ಔಷಧ ಸಿಂಪಡಣೆ ಮೂಲಕ ಸ್ವಚ್ಛತೆಗೆ ಕ್ರಮಕೈಗೊಳ್ಳಲಾಯಿತು. ಮೈಸೂರು - ಗೋಣಿಕೊಪ್ಪ ಹೆದ್ದಾರಿಯಲ್ಲಿ ಪಟ್ಟಣವಿರುವುದರಿಂದ ಹೆಚ್ಚು ಮುತುವರ್ಜಿ ತೆಗೆದುಕೊಂಡಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಮುಂದಾಳತ್ವದಲ್ಲಿ ಸಿಂಪಡಣೆ ಮಾಡಲಾಯಿತು.