ಮಡಿಕೇರಿ, ಏ. 2 : ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಪಡಿತರವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ. ಬೋಪಯ್ಯ ವಿತರಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಹಸಿದ ಹೊಟ್ಟೆಗೆ ತಣಿವು ಪೆಟ್ಟಿಗೆ ಹಾಗೂ ದಾನಿಗಳಿಂದ ಸಂಗ್ರಹವಾದ ಆಹಾರವನ್ನು ದಾಸ್ತಾನು ಮಾಡಲಾಗುತ್ತಿದ್ದು ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಮತ್ತು ಬಡವರಿಗೆ ಪಡಿತರವನ್ನು ವಿತರಿಸಲಾಗುತ್ತಿದೆ ಎಂದರು.
ಮೇಕೇರಿ, ಹಾಕತ್ತೂರು ಜನತೆಗೆ ಪಡಿತರ ವಿತರಿಸಿದರು. ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಪಡಿತರ ವಿತರಿಸಿದರು. ಕುಟುಂಬಕ್ಕೆ 10 ಕೆ.ಜಿ. ಅಕ್ಕಿ, 1 ಕೆ.ಜಿ. ಬೇಳೆ, 1 ಕೆ.ಜಿ. ಸಕ್ಕರೆ, 1 ಕೆ.ಜಿ. ಉಪ್ಪು, 2 ಕೆ.ಜಿ ಗೋಧಿ, 1 ಲೀಟರ್ ಅಡುಗೆ ಎಣ್ಣೆಯನ್ನು ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ರಾಜು ತಿಳಿಸಿದರು.
ತಹಶೀಲ್ದಾರ್ ಮಹೇಶ್, ಪೌರಾಯುಕ್ತ ಎಂ.ಎಲ್ ರಮೇಶ್, ಶಿರಸ್ತೇದಾರ್ ಪ್ರವೀಣ್ ಕುಮಾರ್ ಇತರರು ಇದ್ದರು.