ವೀರಾಜಪೇಟೆ, ಏ. 7: ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕಿನಲ್ಲಿ ಲಾಕ್‍ಡೌನ್ ನಿರ್ಬಂಧ ವೀರಾಜಪೇಟೆ, ಏ. 7: ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕಿನಲ್ಲಿ ಲಾಕ್‍ಡೌನ್ ನಿರ್ಬಂಧ ಮನೆಯಲ್ಲಿಯೇ ಇರುವಂತೆ ನೋಡಿ ಕೊಂಡು ಪೊಲೀಸ್ ಬಂದೋ ಬಸ್ತ್‍ನ್ನು ಮುಂದುವರೆಸುವಂತೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರ ಸಮ್ಮುಖದಲ್ಲಿ ನಡೆದ ಕೊರೊನಾ ವೈರಸ್ ತಡೆಗಟ್ಟುವಿಕೆ ಕಾರ್ಯಾಚರಣೆಯ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಯಿತು.ತಾಲೂಕು ಕಚೇರಿಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬೋಪಯ್ಯ ಅವರು ಕೊರೊನಾ ವೈರಸ್ ಹರಡುವಿಕೆಯೂ ಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೂ ಲಾಕ್‍ಡೌನ್

(ಮೊದಲ ಪುಟದಿಂದ) ನಿರ್ಬಂಧ ಹಾಗೂ ಪೊಲೀಸ್ ಬಂದೋಬಸ್ತ್ ಈಗಿನಂತೆಯೇ ಮುಂದುವರೆಯಬೇಕು. ಹೊರ ರಾಜ್ಯದಿಂದ ಕಾರ್ಮಿಕರಾಗಿ ತಾಲೂಕಿಗೆ ಬಂದಿರುವ ನಿರ್ಗತಿಕ ಕಾರ್ಮಿಕ ಫಲಾನುಭವಿಗಳನ್ನು ಗುರುತಿಸಿ ಸಹಿ ಪಡೆದು ಪಡಿತರ ಕಿಟ್‍ಗಳನ್ನು ವಿತರಿಸಬೇಕು. ವೀರಾಜಪೇಟೆಯ ತುರ್ತು ಚಿಕಿತ್ಸಾ ರೋಗಿಗಳು ಚಿಕಿತ್ಸೆಗಾಗಿ ಮೈಸೂರು, ಇತರ ಜಿಲ್ಲೆಗಳಿಗೆ ತೆರಳ ಬೇಕಾದರೆ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಿಂದಲೇ ಅಗತ್ಯ ಚಿಕಿತ್ಸೆಯ ವಿವರಗಳ ಮಾಹಿತಿಯೊಂದಿಗೆ ಅನುಮತಿ ಮೇರೆಗೆ ಆಂಬ್ಯುಲೆನ್ಸ್‍ನಲ್ಲಿ ತೆರಳಬಹುದಾಗಿದೆ. ಎಲ್ಲಾ ಅಧಿಕಾರಿಗಳು ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಕಡುಬಡವರು, ನಿರ್ಗತಿಕರು, ನಿರ್ಗತಿಕ ಕಾರ್ಮಿಕರು ಗಳಿಗೆ ಸೂಕ್ತ ಸಮಯದಲ್ಲಿ ಪಡಿತರ ಕಿಟ್‍ಗಳನ್ನು ವಿತರಿಸಬೇಕು. ಕೊಡಗು ಕೇರಳ ಸಂಪರ್ಕಿಸುವ ಕರಿಕೆ, ಕುಟ್ಟ ಹಾಗೂ ಮಾಕುಟ್ಟ ಪ್ರದೇಶದ ಚೆಕ್‍ಪೋಸ್ಟ್‍ಗಳಲ್ಲಿ ಹೊರ ರಾಜ್ಯದಿಂದ ಬಂದವರು ನುಸಳದಂತೆ ಕಠಿಣ ಕ್ರಮ ವಹಿಸುವಂತೆ ತಿಳಿಸಿದರು.

ವೀರಾಜಪೇಟೆ ತಾಲೂಕು ಆಡಳಿತದಿಂದ ಮೂರು ದಿನಗಳ ಹಿಂದೆ ತಾಲೂಕಿನಲ್ಲಿ ಹೊರ ರಾಜ್ಯದಿಂದ ಬಂದ ಸುಮಾರು 1647 ನಿರ್ಗತಿಕ ಕಾರ್ಮಿಕರಿಗೆ ಪಡಿತರ ಕಿಟ್‍ಗಳನ್ನು ವಿತರಿಸಿದನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.

ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಕೆ.ಎಸ್.ನಂದೀಶ್, ನೊಡೇಲ್ ಅಧಿಕಾರಿ ನಂಜುಂಡ ಸ್ವಾಮಿ, ಡಿ.ವೈ.ಎಸ್. ಪಿ.ಸಿ.ಟಿ. ಜಯಕುಮಾರ್, ವೀರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್, ಸಹಾಯಕ ಅಭಿಯಂತರ ಎನ್.ಪಿ. ಹೇಮ್ ಕುಮಾರ್, ತಾಲೂಕು ಪಂಚಾಯಿತಿ ಅಧಿಕಾರಿಗಳು, ಪಶುಸಂಗೋಪನಾ ಅಧಿಕಾರಿ ತಿಮ್ಮಯ್ಯ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ, ವೀರಾಜಪೇಟೆ ತಾಲೂಕು ವೈದ್ಯಾಧಿಕಾರಿ ಡಾ:ಯತಿರಾಜು. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಕಚೇರಿಯ ಸಿಬ್ಬಂದಿ ಹಾಜರಿದ್ದರು.

ಮೂರು ಮಂದಿ ಕಾರ್ಮಿಕರು ಹಿಂದಕ್ಕೆ : ಕೇರಳದ ಕಾಸರಗೋಡಿ ನಿಂದ ಕಾಲ್ನಡಿಗೆಯಲ್ಲಿ ಕೊಡಗು ಕೇರಳ ಗಡಿ ಪ್ರದೇಶವಾದ ಮಾಕುಟ್ಟ ಚೆಕ್‍ಪೋಸ್ಟ್‍ಗೆ ಬಂದಿದ್ದ ಮೂರು ಮಂದಿ ಕಾರ್ಮಿಕರನ್ನು ಹಿಂದಕ್ಕೆ ಕಳಿಸಲಾಗಿದ್ದು, ಕೇರಳದಲ್ಲಿಯೇ 14 ದಿನಗಳ ಆರೋಗ್ಯ ತಪಾಸಣೆ ಮಾಡಿ ದೃಢೀಕರಣ ಪತ್ರ ಪಡೆದ ನಂತರ ಕರ್ನಾಟಕಕ್ಕೆ ಮರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಈ ಮೂರು ಮಂದಿ ಕಾರ್ಮಿಕ ರಾಗಿ ದುಡಿಯಲು ಕೆಲವು ತಿಂಗಳುಗಳ ಹಿಂದೆ ಕರ್ನಾಟಕದಿಂದ ಕೇರಳದ ಕಾಸರಗೋಡಿಗೆ ತೆರಳಿದ್ದರೆಂದೂ ಗಡಿಯಲ್ಲಿ ಅಧಿಕಾರಿಗಳು ನಡೆಸಿದ ತನಿಖೆಯಿಂದ ಗೊತ್ತಾಗಿದೆ.