ಮಡಿಕೇರಿ, ಏ. 9: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಮಡಿಕೇರಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ವೈದ್ಯಕೀಯ ಪರೀಕ್ಷೆಯಲ್ಲಿ 30 ಪತ್ರಕರ್ತರು ತಪಾಸಣೆಗೆ ಒಳಪಟ್ಟರು. ಪ್ರಜಾಸತ್ಯ ದಿನಪತ್ರಿಕೆ ಸಂಪಾದಕರಾಗಿರುವ ಶ್ರೀ ರಾಜರಾಜೇಶ್ವರಿ ಆಸ್ಪತ್ರೆ ಮುಖ್ಯಸ್ಥ ಡಾ.ಬಿ.ಸಿ. ನವೀನ್ ಕುಮಾರ್ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಿದರು.

ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೂ ತಪಾಸಣೆ ನಡೆಸಿದರು. ಕೆಲವರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಪಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಸಹ ಕಾರ್ಯದರ್ಶಿ ನಾಗರಾಜ ಶೆಟ್ಟಿ, ನಿರ್ದೇಶಕರಾದ ಚೀಯಂಡಿ ತೇಜಸ್ ಪಾಪಯ್ಯ, ಕಿಶೋರ್ ರೈ ಕತ್ತಲೆಕಾಡು, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೆ.ಎ. ಆದಿತ್ಯ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ನಿರ್ದೇಶಕರಾದ ಸುವರ್ಣ ಮಂಜು, ನವೀನ್ ಸುವರ್ಣ, ಬೊಳ್ಳಜೀರ ಬಿ.ಅಯ್ಯಪ್ಪ, ಗಣೇಶ್ ಕುಡೆಕಲ್, ದಿವಾಕರ್ ಜಾಕಿ, ರಾಕೇಶ್ ಕೊಡಗು ಮತ್ತಿತರರು ಇದ್ದರು.