ಸುಂಟಿಕೊಪ್ಪ, ಏ. 10: ಬೆಂಗಳೂರು ಟರ್ಫ್‍ಕ್ಲಬ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 25 ಲಕ್ಷ ನೆರವನ್ನು ಟರ್ಫ್ ಕ್ಲಬ್ ಅಧ್ಯಕ್ಷ ಡಿ.ವಿನೋದ್ ಶಿವಪ್ಪ ಅವರು ನೀಡಿದರು.

ಡಿ.ವಿನೋದ್ ಶಿವಪ್ಪ ಅವರ ನೇತೃತ್ವದಲ್ಲಿ ಕ್ಲಬ್ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರೂ. 25 ಲಕ್ಷದ ಚೆಕ್ ಅನ್ನು ಹಸ್ತಾಂತರಿಸಿದರು.

ಈ ಸಂದರ್ಭ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಪದಾಧಿಕಾರಿಗಳಾದ ಶಿವಕುಮಾರ್ ಖೇಣಿ, ಹರಿಮೋಹನ್ ನಾಯ್ಡು, ಡಾ. ಸಿ.ಎ. ಪ್ರಶಾಂತ್ ಉಪಸ್ಥಿತರಿದ್ದರು.