ಗೋಣಿಕೊಪ್ಪ, ಏ. 15: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ರೂ. 25 ಲಕ್ಷ ಚೆಕ್ಕನ್ನು ಶಾಸಕ ಕೆ.ಜಿ. ಬೋಪಯ್ಯ ಅವರ ಮೂಲಕ ಸರ್ಕಾರಕ್ಕೆ ನೀಡಲಾಯಿತು.ಆರ್.ಎಂ.ಸಿ. ಅಧ್ಯಕ್ಷ ಸುಜಾ ಪೂಣಚ್ಚ ಶಾಸಕರ ಕಚೇರಿಯಲ್ಲಿ ಶಾಸಕ ಕೆ.ಜಿ. ಬೋಪಯ್ಯ ಹಾಗೂ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಸಹಕಾರದೊಂದಿಗೆ ಉಸ್ತುವಾರಿ ಸಚಿವ ವಿ.ಎ. ಸೋಮಣ್ಣ ಅವರಿಗೆ ರೂ. 25 ಲಕ್ಷ ಚೆಕ್ಕನ್ನು ನೀಡಿದರು. ಈ ಸಂದರ್ಭ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯರುಗಳಾದ ಗುಮ್ಮಟೀರ ಕಿಲನ್ ಗಣಪತಿ, ವಿನು, ಕಟ್ಟೆರ ಈಶ್ವರ, ಬಿಜೆಪಿ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಸೇರಿದಂತೆ ಹಲವರು ಹಾಜರಿದ್ದರು.