ಮಡಿಕೇರಿ, ಏ. 18: ದೆಹಲಿಯ ಧಾರ್ಮಿಕ ಸಮ್ಮೇಳನ ಸಂಬಂಧ ಜಿಲ್ಲೆಯಿಂದ ದೆಹಲಿಗೆ ತೆರಳಿ ಹಿಂತಿರುಗಿರುವ ಜನರು-14, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಜನರು-283, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಇತರೆ ರಾಜ್ಯದ ಜನರು-18, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-315.

ಇಲ್ಲಿಯವರೆಗೆ ಒಟ್ಟು 190 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಹಾಲಿ ದೃಢಪಟ್ಟಿದ್ದ 1 ಪ್ರಕರಣ ಗುಣಮುಖ ರಾಗಿರುವುದರಿಂದ ಒಟ್ಟು 140 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 50 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 28 ಜನರು ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.