ಮಡಿಕೇರಿ, ಏ. 19: ಭಾರತ ಸರ್ಕಾರವು ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಹಿಂದೆ ಕೊರೊನಾ ಪ್ರಕರಣ ದೃಢಪಟ್ಟಿದ್ದು, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಕೈಗೊಂಡ ಪರಿಣಾಮಕಾರಿ ಕ್ರಮಗಳಿಂದ ಇಡೀ ದೇಶದಲ್ಲಿ ಕಳೆದ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದೇ ಇರುವ ಎರಡೇ ಎರಡು ಜಿಲ್ಲೆಗಳ ಪೈಕಿ ಕರ್ನಾಟಕದ ಕೊಡಗು ಜಿಲ್ಲೆಯೂ ಒಂದು ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್‍ವಾಲ್ ತಿಳಿಸಿದ್ದಾರೆ.

ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ಶಂಕಿತ ಪ್ರಕರಣಗಳಲ್ಲಿ ಪ್ರಯೋಗಾಲಯ ಪರೀಕ್ಷೆಗಳನ್ನು ಹೆಚ್ಚಿಸಿದ್ದು ಮತ್ತು ಜಿಲ್ಲೆಯಾದ್ಯಂತ ವಿವಿಧ ಕ್ರಮಗಳ ಮೂಲಕ ಕಣ್ಗಾವಲನ್ನು ತೀವ್ರಗೊಳಿಸಿದ್ದು; ಸಾರ್ವಜನಿಕರು ಸಹಕರಿಸಬೇಕೆಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.