ಕೂಡಿಗೆ, ಏ. 19 : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಸಮೀಪದ ಮಾವಿನಹಳ್ಳ ಗ್ರಾಮದ ಪ್ರತೀಶ್ ಲೀಲಾ ದಂಪತಿಯ ಎರಡೂವರೆ ತಿಂಗಳ ಗಂಡು ಮಗು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಮಗುವಿಗೆ ಉಸಿರಾಟದ ತೊಂದರೆ ಕಂಡುಬಂದು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲು ಲಾಕ್‍ಡೌನ್ ಹಿನ್ನೆಲೆಯಲ್ಲಿ ಪೊಲೀಸರ ಭಯದಿಂದ ಅಲ್ಲಿನ ವಾಹನ ಚಾಲಕರು ಮುಂದೆ ಬರಲಿಲ್ಲ; ಕೆಲ ಗಂಟೆಗಳ ನಂತರ ಗ್ರಾಮದ ಯುವಕನೊಬ್ಬ ಕಾರಿನಲ್ಲಿ ಹೆಬ್ಬಾಲೆಗೆ ಮಗುವನ್ನು ಕರೆತಂದಿದ್ದು; ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿ ನಂತರ ಕುಶಾಲನಗರ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಯಿತು.

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸಲಾಯಿತ್ತಾದರೂ; ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.