ಕೂಡಿಗೆ, ಏ. 22: ಕಳ್ಳಭಟ್ಟಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಾಲು ಸಹಿತ ಪೆÇಲೀಸರು ಬಂಧಿಸಿದ್ದಾರೆ. ಕುಶಾಲನಗರ ಸಮೀಪದ ಗುಡ್ಡೆಹೊಸೂರು ವೃತ್ತದ ಸಮೀಪ. ಅಡ್ಡ ರಸ್ತ್ತೆಯಲ್ಲಿ ಕಳ್ಳಭಟ್ಟಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನಂದೀಶ್ ಮತ್ತು ಸಿಬ್ಬಂದಿಗಳು ಬೊಳ್ಳೂರು ಗ್ರಾಮದ ಪ್ರಶಾಂತ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈತನಿಂದ 5 ಲೀಟರ್ ಪ್ರಮಾಣ ಕಳ್ಳಭಟ್ಟಿ ಮತ್ತು ಮಾರಾಟಕ್ಕೆ ಬಳಸಿದ್ದ ಕಾರನ್ನು ಅನ್ನು ಮುಟ್ಟುಗೋಲು ಹಾಕಿಕೊಂಡು ಮೊಕದ್ದಮೆ ದಾಖಲಿಸಿದ್ದಾರೆ. ಸಿಬ್ಬಂದಿಗಳಾದ ಪ್ರಸನ್ನ, ವಿವೇಕ್, ರಾಜಣ್ಣ ಕಾರ್ಯಾಚರಣೆಯಲ್ಲಿ ಇದ್ದರು.