ಮಡಿಕೇರಿ, ಏ. 22: ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಕಾರ್ಯಾಲಯದ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 1077ಗೆ ಹಲವಾರು ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗುತ್ತಿದೆ. ಆ ದಿಸೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಕ್ಷಿಪ್ರಗತಿಯಲ್ಲಿ ಪರಿಹರಿಸುವ ನಿಟ್ಟಿನಲ್ಲಿ ‘ನೇರ ಫೋನ್ ಇನ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಆ ನಿಟ್ಟಿನಲ್ಲಿ ತಾ. 24 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾ. 27 ರಂದು ಆಹಾರ ಇಲಾಖೆ, ತಾ. 29 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೇ 2 ರಂದು ಕೃಷಿ/ ತೋಟಗಾರಿಕೆ ಇಲಾಖೆ, ಮೇ 4 ರಂದು ನಗರ ಸ್ಥಳೀಯ ಸಂಸ್ಥೆ, ಮೇ 6 ರಂದು ವಿಶೇಷಚೇತನರು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ/ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೇ 8 ರಂದು ಸಮಾಜ ಕಲ್ಯಾಣ ಇಲಾಖೆ/ ಐಟಿಡಿಪಿ, ಮೇ 11 ರಂದು ಅರಣ್ಯ ಇಲಾಖೆ, ಹೀಗೆ ಆಯಾಯ ದಿನಗಳಂದು ಮಧ್ಯಾಹ್ನ 3 ರಿಂದ 4 ಗಂಟೆ ವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. ಆಯಾಯ ಇಲಾಖೆಯ ಮುಖ್ಯಸ್ಥರು ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.