ಕೂಡಿಗೆ, ಏ. 23: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಪೊಲೀಸ್ ಠಾಣಾಧಿಕಾರಿ ನಂದೀಶ್‍ಕುಮಾರ್ ರಂಜಾನ್ ಹಬ್ಬದ ಇಫ್ತಾರ್ ಕೂಟ ಆಚರಿಸದಂತೆ ಸೂಚಿಸಿದರು. ಲಾಕ್‍ಡೌನ್ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಕುಶಾಲನಗರ ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ಪಕ್ಷದ ಪ್ರಮುಖರು, ವಿವಿಧ ದೇವಾಲಯ ಸಮಿತಿಯ ಸದಸ್ಯರುಗಳು ಹಾಜರಿದ್ದರು.