ಮಡಿಕೇರಿ, ಏ.25: ಡಾ.ರಾಜ್‍ಕುಮಾರ್ ಅವರ ಸರಳತೆ, ಕಲಾಪ್ರತಿಭೆ ಮತ್ತು ಜೀವನ ಶೈಲಿಯಿಂದ ಚಿತ್ರರಂಗದಲ್ಲಿ ಉತ್ತುಂಗಕ್ಕೆ ಬೆಳೆದರು ಎಂದು ಉಪ ವಿಭಾಗಾ ಧಿಕಾರಿ ಟಿ.ಜವರೇಗೌಡ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ವಾರ್ತಾಭವನದಲ್ಲಿ ಸರಳವಾಗಿ ನಡೆದ ಡಾ. ರಾಜ್‍ಕುಮಾರ್ ಅವರ 92 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

1959 ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಡಾ.ರಾಜ್‍ಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಎಂದಿಗೂ ಅಜರಾಮರ, ಚಲನಚಿತ್ರ ರಂಗದಲ್ಲಿ ಉತ್ತುಂಗಕ್ಕೆ ಏರಿದರೂ ಸಹ ಸರಳ ವ್ಯಕ್ತಿತ್ವವನ್ನು ಅವರು ಅಳವಡಿಸಿಕೊಂಡಿದ್ದರು. ಸಮಾಜಕ್ಕೆ ಆದರ್ಶಗಳನ್ನು ಕಟ್ಟಿಕೊಟ್ಟಂತಹ, ಸಾಮಾಜಿಕ ಸಂದೇಶಗಳನ್ನು ನೀಡುವ ಚಿತ್ರಗಳನ್ನು ನೀಡಿದ ಹೆಗ್ಗಳಿಕೆ ಡಾ.ರಾಜ್‍ಕುಮಾರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.