ಸಿದ್ದಾಪುರ, ಏ. 26: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರುಗಳೊಂದಿಗೆ ತಾ. 24 ರಂದು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.ಈ ಸಂದರ್ಭ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸದಸ್ಯರುಗಳು ಸಚಿವರಿಂದ ಮಾಹಿತಿ ಪಡೆದು ಕೊಂಡರು. ಕೊರೊನಾ ಸಂಭಂದಿಸಿದ ಮುಂಜಾಗ್ರತಾ ಕ್ರಮವಹಿಸುವಂತೆ ಹಾಗೂ ಉದ್ಯೋಗ ಖಾತ್ರಿಯ ಬಗ್ಗೆ ಮಾಹಿತಿ ಪಡೆದು ಕೊಂಡರು. ಈ ಸಂದರ್ಭ ಗ್ರಾಮ ಪಂಚಾಯತಿ ಅದ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫೀಯಾ ಹಾಗೂ ಪಿ.ಡಿ.ಓ ಅನಿಲ್ ಕುಮಾರ್, ಸದಸ್ಯರುಗಳು ಹಾಜರಿದ್ದರು. ಇದಾದ ಬಳಿಕ ಪ್ರಧಾನಿ ಮೋದಿಯವರ ವೀಡಿಯೋ ಕಾನ್ಫರೆನ್ಸ್ ವೀಕ್ಷಿಸಿದರು.