ಮಡಿಕೇರಿ, ಏ.27:ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಲಕ್ಷ ರೂ.ಗಳ ಚೆಕ್‍ನ್ನು ಶಾಸಕ ಕೆ.ಜಿ ಬೋಪಯ್ಯ ಅವರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಂಬಿ ಕಾರ್ಯಪ್ಪ ಹಸ್ತಾಂತರಿಸಿದರು.

ನಗರದ ಶಾಸಕರ ಕಚೇರಿಯಲ್ಲಿ ಚೆಕ್ ಚಿನ್ನು ಹಸ್ತಾಂತರಿಸಿದರು. ಈ ಸಂದರ್ಭ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಕಾಂಗೀರ ಸತೀಶ್, ನಿರ್ದೇಶಕ ಬೆಪ್ಪುರನ ಮೇದಪ್ಪ, ಜಯ ನಂಜಪ್ಪ, ಮುಂಡಂಡ ಕುಟ್ಟಪ್ಪ, ಡಿ.ಎನ್.ಅನಿಲ್ ಕುಮಾರ್, ಕಾರ್ಯದರ್ಶಿ ಸಂದೇಶ್, ಲೆಕ್ಕ ಅಧೀಕ್ಷಕ ಚೆಲುವರಾಜ್, ಗಾಳಿಬೀಡು ಗ್ರಾಮ ಅಧ್ಯಕ್ಷ ಸುಭಾಷ್ ಸೋಮಯ್ಯ ಇತರರು ಇದ್ದರು.

ಎಪಿಎಂಸಿಗೆ ಶಾಸಕರು ಭೇಟಿ: ಶಾಸಕ ಕೆ.ಜಿ. ಬೋಪಯ್ಯ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಕೋವಿಡ್-19 ಸಂಬಂಧ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಾವು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.