ಸೋಮವಾರಪೇಟೆ, ಏ. 29: ವಿವಾಹಿತ ವ್ಯಕ್ತಿಯೋರ್ವ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸಮೀಪದ ಹಾನಗಲ್ಲು ಬಾಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಹಾನಗಲ್ಲು ಬಾಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ಕೃಷ್ಣಪ್ಪ (36) ಸಾವನ್ನಪ್ಪಿದವರಾಗಿದ್ದು, ನಿನ್ನೆ ರಾತ್ರಿ 1.30ರ ಸುಮಾರಿಗೆ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ದಿಢೀರ್ ಕುಸಿದು ಬಿದ್ದ ಕೃಷ್ಣಪ್ಪ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ಅಷ್ಟರಲ್ಲಾಗಲೇ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.

ಇಂದು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಮೃತ ಕೃಷ್ಣಪ್ಪ ಪತ್ನಿ ಸೇರಿದಂತೆ ಈರ್ವರು ಪುತ್ರಿಯರನ್ನು ಅಗಲಿದ್ದಾರೆÉ. ಮೃತದೇಹದ ಎಫ್‍ಎಸ್‍ಎಲ್ ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.