*ಗೋಣಿಕೊಪ್ಪ, ಏ. 29 : ಜಿಲ್ಲಾ ಜಾಂಬವ ಯುವ ಸೇನೆ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನುಮ ದಿನಾಚರಣೆಯ ಅಂಗವಾಗಿ ಇಲ್ಲಿನ ಪೌರಕಾರ್ಮಿಕರಿಗೆ ದಿನಸಿ ಪದಾರ್ಥಗಳನ್ನು ನೀಡಲಾಯಿತು.

ಜಾಂಬವ ಯುವ ಸೇನೆ ಜಿಲ್ಲಾಧ್ಯಕ್ಷ ಸತೀಶ್ ಸಿಂಗಿ ನೇತೃತ್ವದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅಂಬೇಡ್ಕರ್ ಜೀವನದ ಹಾದಿಯಲ್ಲಿ ನಡೆದು ಬಂದ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯಿತಿ ಸದಸ್ಯೆ ರತಿ ಅಚ್ಚಪ್ಪ ನಿರ್ಗತಿಕರಿಗೆ ಭೋಜನದ ವ್ಯವಸ್ಥೆ ಮಾಡಿದರು.

ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಅಂಬೇಡ್ಕರ್ ಜನ್ಮೋತ್ಸವವನ್ನು ಆಚರಣೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮತ್ತು ಸದಸ್ಯರುಗಳಾದ ರತಿಅಚ್ಚಪ, ಮುರುಗ, ಜಮ್ಮಡ ಸೋಮಣ್ಣ, ರಾಮಕೃಷ್ಣ, ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.