ಮಡಿಕೇರಿ, ಏ. 29: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ದೀಪ ಬೆಳಗಿಸಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸರಳವಾಗಿ ಜಯಂತಿ ಕಾರ್ಯಕ್ರಮ ನೆರವೇರಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್ ಇತರರು ಇದ್ದರು.

ಸೋಮವಾರಪೇಟೆ: ಇಲ್ಲಿನ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಶಂಕರಾಚಾರ್ಯರ ಭಾವಚಿತ್ರಕ್ಕೆ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಅವರು ಪುಷ್ಪಾರ್ಚನೆ ಮಾಡಿದರು. ಸಮಾಜದ ಪ್ರಮುಖರಾದ ಎಸ್.ಡಿ. ವಿಜೇತ್, ಎಸ್.ಎನ್. ಶ್ಯಾಂಸುಂದರ್, ಯಡೂರು ಹರೀಶ್, ರಾಜೇಶ್, ಎಸ್.ಎನ್. ಸೋಮಶೇಖರ್, ಜಯಂತ್, ದೇವಿ ಬಳಗದ ಅಧ್ಯಕ್ಷೆ ಎಲ್.ಎಂ. ಪ್ರೇಮಾ, ಭಾನುಮತಿ ಅವರುಗಳು ಉಪಸ್ಥಿತರಿದ್ದರು.