ನಾಪೆÇೀಕ್ಲು, ಮೇ 14: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಕಾರ್ಮಿಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೆÇೀಕ್ಲು ಪೆÇಲೀಸ್ ಠಾಣಾ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೋಡಿಮಣಿಯಂಡ ಜೋಯಪ್ಪ ಅವರ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಪಿ.ಕೆ.ಲೋಕೇಶ್ (42) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ. ಈತ ಒಬ್ಬಂಟಿಯಾಗಿ ಕಳೆದ ಮೂರು ತಿಂಗಳಿನಿಂದ ಜೋಯಪ್ಪ ಅವರ ಲೈನ್‍ಮನೆಯಲ್ಲಿ ವಾಸವಿದ್ದು, ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಪತ್ನಿ ಮತ್ತು ಮಕ್ಕಳಿಂದ ದೂರವಿದ್ದ ಈತ ತಾ. 13 ರಿಂದ ನಾಪತ್ತೆಯಾಗಿದ್ದ ಈತನನ್ನು ಹುಡುಕುವ ಸಂದರ್ಭ ತಾ. 14ರಂದು ಕೆರೆಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ನಾಪೆÇೀಕ್ಲು ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.