ಮಡಿಕೇರಿ, ಮೇ 16: ಕರ್ನಾಟಕ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿ ಮಾತ್ರ ರೂ. 5 ಸಾವಿರವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ: ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಎಲ್ಲಾ ನೋಂದಾಯಿತ ಕಾರ್ಮಿಕರು ಆಯಾಯ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕಿದೆ. ದಾಖಲಾತಿಗಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿರುವ ಬಗ್ಗೆ ಪಡೆದ ನೋಂದಾಯಿತ ಗುರುತಿನ ಚೀಟಿ ಪ್ರತಿ, ಆಧಾರ್ ಕಾರ್ಡ್ನ ಪ್ರತಿ, ಬ್ಯಾಂಕ್ ಅಕೌಂಟ್ ನಂಬರ್, ಐ.ಎಫ್.ಸಿ. ಕೋಡ್, ಹೆಸರು, ವಿಳಾಸ ಇರುವ ಬ್ಯಾಂಕ್ ಪಾಸ್ ಪುಸ್ತಕದ ಪುಟದ ಸ್ಪಷ್ಟವಾಗಿ ಕಾಣುವ ಜೆರಾಕ್ಸ್ ಪ್ರತಿಯನ್ನು ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸಲ್ಲಿಸಬೇಕಿದೆ.
ಸಹಾಯಕ್ಕಾಗಿ ಸಂಪರ್ಕಿಸಬೇಕಾದ ಸಂಖ್ಯೆ: ಮಡಿಕೇರಿಯ ಹಿರಿಯ ಕಾರ್ಮಿಕ ನಿರ್ದೇಶಕ ಎಂ.ಎಂ. ಯತ್ನಟ್ಟಿ 9448642111, ಜರೀನಾ (7760065658) ಮತ್ತು 08272-225534, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕಿನಲ್ಲಿ ಕೆ.ಎನ್. ಲೀನಾ (9980344882)ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.