ಗೋಣಿಕೊಪ್ಪಲು, ಮೇ 16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಮಡಿಕೇರಿ ಯಲ್ಲಿ ರಕ್ತದಾನ ಕಾರ್ಯಕ್ರಮ ಜರುಗಿತು. ಯುವ ಕಾಂಗ್ರೆಸ್‍ನ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್‍ನ ವತಿಯಿಂದ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಯುವ ಮುಖಂಡರು ರಕ್ತದಾನ ಮಾಡಿದರು. ಈ ಸಂದರ್ಭ ಯುವ ಕಾಂಗ್ರೆಸ್ ಪ್ರಮುಖ ಕುಲ್ಲಚಂಡ ಪ್ರಮೋದ್ ಗಣಪತಿ, ನಗರ ಕಾಂಗ್ರೆಸ್ ಉಪಾಧ್ಯಕ್ಷ ನಾಮೇರ ಅಂಕಿತ್ ಪೆÇನ್ನಪ್ಪ, ಮೈಸಿ ಕತ್ತಣಿ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.