ಮಡಿಕೇರಿ, ಮೇ 20: ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ವತಿಯಿಂದ ಪ್ರತಿ ವರ್ಷ ರಂಜಾನ್ ತಿಂಗಳಲ್ಲಿ ನಡೆಸುವ 15ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವನ್ನು ಅಲ್ಲಿನ ತೆಕ್ಕಿಲ್ ಸಮುದಾಯ ಭವನದಲ್ಲಿ ದಿನಾಂಕ 21 ರಂದು ಸಂಜೆ 4.30ಕ್ಕೆ ಏರ್ಪಡಿಸಲಾಗಿದೆ. ಈ ವರ್ಷ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಯಾವುದೇ ಸಾರ್ವಜನಿಕ ಸಭೆಯನ್ನು ನಡೆಸದೆ, ವಿಶ್ವಾದÀ್ಯಂತ ಹಬ್ಬಿದ ಕೋವಿಡ್ 19 ಮಹಾಮಾರಿಯ ನಿರ್ಮೂಲನೆಗೆ ವಿಶೇಷ ಪ್ರಾರ್ಥನೆಯನ್ನು ನಡೆಸಿ ಇಫ್ತಾರ್ ಕಿಟ್ ಅನ್ನು ಅರ್ಹ ಫಲಾನುಭವಿಗಳ ಮನೆಗಳಿಗೆ ತಲುಪಿಸಲಾಗುವುದು.

ವಿಶೇಷ ಪ್ರಾರ್ಥನೆಯನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬ್ ಅಲ್ ಹಾಜ್ ಇಸಾಕ್ ಬಾಖವಿ ನೆರವೇರಿಸಲಿದ್ದು, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್, ಕೋಶಾಧಿಕಾರಿ ಟಿ. ಎಂ. ಜಾವೇದ್ ತೆಕ್ಕಿಲ್ ಮೊದಲಾದವರು ಉಪಸ್ಥಿತರಿರುವರು ಎಂದು ಸಂಸ್ಥೆಯ ಕಾರ್ಯದರ್ಶಿ ಅಶ್ರಫ್ ಗುಂಡಿ ತಿಳಿಸಿರುತ್ತಾರೆ.