ಕೂಡಿಗೆ, ಮೇ 21: ಹಾರಂಗಿ ತೋಟಗಾರಿಕಾ ಇಲಾಖೆಯಲ್ಲಿ ತೋಟಗಾರಿಕಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಯ್ಯ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಇಲಾಖೆ ಸಿಬ್ಬಂದಿಗಳಿಂದ ಬೀಳ್ಕೊಡಲಾಯಿತು.

ಈ ಸಂದರ್ಭ ಹಾರಂಗಿ ತೋಟಗಾರಿಕಾ ಸಹಾಯಕ ನಿರ್ದೇಶಕ ವರದರಾಜ್ ಸೇರಿದಂತೆ ಹಿರಿಯ, ಕಿರಿಯ ಅಧಿಕಾರಿ ವರ್ಗದವರು ಮತ್ತು ಸಿಬ್ಬಂದಿಗಳು ಹಾಜರಿದ್ದು ಹನುಮಯ್ಯ ಅವರಿಗೆ ಶಾಲು ಹೊದಿಸಿ ಫಲ ತಾಂಬುಲ ನೀಡಿ ಗೌರವಿಸಿದರು.