ಜಿಲ್ಲಾಧಿಕಾರಿಗಳಿಗೆ ದೂರು

*ಸಿದ್ದಾಪುರ, ಮೇ 21: ಮುಂಬರುವ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎನ್ನುವ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡುವ ಮೂಲಕ ಅಭಿವೃದ್ಧಿ ಅಧಿಕಾರಿ ದ್ವೇಷ ಸಾಧಿಸುತ್ತಿದ್ದಾರೆ ಎಂದು ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ಸದಸ್ಯ ಭುವನೇಂದ್ರ ಆರೋಪಿಸಿದ್ದಾರೆ.

ಹೆಸರು ನಾಪತ್ತೆಯಾಗಿರುವ ದಾಖಲೆ ಸಹಿತ ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವ ಅವರು ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಗ್ರಾ.ಪಂ ನಿಯಮಕ್ಕೆ ವಿರುದ್ಧವಾಗಿ ಪಿಡಿಒ ಅವರು ಬೇನಾಮಿ ಹೆಸರಿನಲ್ಲಿ ಗುತ್ತಿಗೆ ಕಾಮಗಾರಿಗಳನ್ನು ಕೈಗೊಂಡಿರುವುದು ಮತ್ತು ತರಕಾರಿ, ಕೋಳಿ ಮಾಂಸ ಮಾರಾಟದಲ್ಲಿ ತೊಡಗಿಸಿಕೊಂಡ ಪ್ರಕರಣವನ್ನು ಬಯಲಿಗೆಳೆದಿದ್ದೇ ಈ ದ್ವೇಷ ಸಾಧನೆಗೆ ಕಾರಣವೆಂದು ಆರೋಪಿಸಿದ್ದಾರೆ.