ಗೋಣಿಕೊಪ್ಪಲು ಮೇ 22: ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಇಂದು ಪೆÇನ್ನಂಪೇಟೆ ನಗರದಲ್ಲಿ ಸಾರ್ವಜನಿಕ ಹಿತದೃಷ್ಟಿ ಮನವಿಯ ಪೆÇೀಸ್ಟರನ್ನು ಪ್ರಚಾರಗೊಳಿಸಲಾಯಿತು. ಸಾರ್ವಜನಿಕ ಸ್ಥಳವನ್ನು ಶುಚಿಯಾಗಿಡುವ ನಿಟ್ಟಿನಲ್ಲಿ ಅಲ್ಲಲ್ಲಿ ಉಗುಳದಂತೆ, ಮಾಸ್ಕ್ ಕಡ್ಡಾಯದ ಬಗ್ಗೆ ಮತ್ತು ಉಲ್ಲಂಘಿಸಿದಲ್ಲಿ ತೆರಬೇಕಾದ ದಂಡದ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ಪೆÇನ್ನಂಪೇಟೆಯ ಹಿರಿಯ ವರ್ತಕ ಎಸ್.ಎಲ್. ಶಿವಣ್ಣ ಚಾಲನೆ ನೀಡಿದರು.

ಈ ಸಂದರ್ಭ ಜಿಲ್ಲಾ ಚೇಂಬರ್‍ನ ಮಾಜಿ ಉಪಾಧ್ಯಕ್ಷ ಶ್ರೀಧರ ನೆಲ್ಲಿತ್ತಾಯ, ಜಿಲ್ಲಾ ಚೇಂಬರ್‍ನ ಉಪಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಉದ್ಯಮಿ ಚಂದನ್ ಕಾಮತ್ ಇದ್ದರು. ಪೆÇನ್ನಂಪೇಟೆಯ ಪ್ರಮುಖ ಸ್ಥಳಗಳಲ್ಲಿ ಮತ್ತು ಬಸ್ ನಿಲ್ದಾಣದಲ್ಲಿ ಮಾಹಿತಿ ಪ್ರಚಾರ ಫಲಕವನ್ನು ಪ್ರಚುರಪಡಿಸಲಾಯಿತು.