ಕಡಂಗ, ಮೇ 22: ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ಈದ್ ಉಲ್ ಫಿತರ್ ಪ್ರಾರ್ಥನೆಯನ್ನು ಸರಳವಾಗಿ ಮನೆಯಲ್ಲಿಯೇ ಪ್ರಾರ್ಥಿಸಲು ಇಂಡಿಯನ್ ಗ್ರಾಂಡ್ ಮುಫ್ತಿ ಹಾಗೂ ಕೊಡಗು ಜಿಲ್ಲಾ ಖಾಜಿ ಸೈಕುನ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕರೆ ನೀಡಿದ್ದಾರೆ. ಜನರು ಸರಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.