ಸೋಮವಾರಪೇಟೆ, ಮೇ 22: ನಿವೇಶನ ರಹಿತರಿಗೆ ಕಾಯ್ದಿರಿಸಿದ್ದ ಪೈಸಾರಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ, ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ವೆ ನಂ 193/3ರಲ್ಲಿ 1.87 ಎಕರೆ ಪೈಸಾರಿ ಜಾಗವನ್ನು ನಿವೇಶನ ರಹಿತರಿಗೆ ನೀಡಬೇಕೆಂದು ಕಿರಗಂದೂರು ಗ್ರಾಮ ಪಂಚಾಯಿತಿಯಲ್ಲಿ ಒಂದು ವರ್ಷದ ಹಿಂದೆಯೇ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಕಾಫಿ ಬೆಳೆಗಾರರೊಬ್ಬರು ಜಾಗವನ್ನು ಒತ್ತುವರಿ ಮಾಡಿಕೊಂಡು, ಕಟ್ಟಡ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ, ಕಾರ್ಮಿಕ ಮಹಿಳೆಯರು ಪೈಸಾರಿ ಜಾಗದಲ್ಲಿ ಪ್ರತಿಭಟನೆ ಕಿರಗಂದೂರು ಗ್ರಾಮ ಪಂಚಾಯಿತಿಯಲ್ಲಿ ಒಂದು ವರ್ಷದ ಹಿಂದೆಯೇ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಕಾಫಿ ಬೆಳೆಗಾರರೊಬ್ಬರು ಜಾಗವನ್ನು ಒತ್ತುವರಿ ಮಾಡಿಕೊಂಡು, ಕಟ್ಟಡ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ, ಕಾರ್ಮಿಕ ಮಹಿಳೆಯರು ಪೈಸಾರಿ ಜಾಗದಲ್ಲಿ ಪ್ರತಿಭಟನೆ ಜಾಗವನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಬಿ.ಸೋಮಪ್ಪ ಹೇಳಿದರು.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿ ವಿನು ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರ್ವೆ ಮಾಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಪೈಸಾರಿ ಜಾಗದ ಹದ್ದುಬಸ್ತು ಸರ್ವೆ ನಡೆಸಿ, ಒತ್ತುವರಿಯಿದ್ದರೆ ತೆರವುಗೊಳಿಸಿ, ನಿವೇಶನ ನೀಡಲು ಸಂಬಂಧಪಟ್ಟ ಇಲಾಖೆಗೆ ಶಿಫಾರಸ್ಸು ಮಾಡಲಾಗುವದು ಎಂದು ಭರವಸೆ ನೀಡಿದ ನಂತರ ಪತ್ರಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರುಗಳಾದ ಪಿ.ಟಿ.ಸುಂದರ, ಶಾರದ, ಪ್ರೇಮ, ಲಲಿತ, ಗಿರಿಜ ಮತ್ತಿತರರು ಉಪಸ್ಥಿತರಿದ್ದರು.