ಸೋಮವಾರಪೇಟೆ, ಜೂ. 3: ಪ.ಪಂ. ವ್ಯಾಪ್ತಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಪ.ಪಂ.ನ ಎಸ್‍ಎಫ್‍ಸಿ ಶೇ.24.10 ಅನುದಾನದಡಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ರಂಜನ್, ಅಂಗನವಾಡಿಗೆ ಆಗಮಿಸುವ ಮಕ್ಕಳಿಗೆ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಸೂಚಿಸಿದರು. ಪ.ಪಂ. ಸದಸ್ಯರುಗಳಾದ ಬಿ.ಆರ್. ಮಹೇಶ್, ಶೀಲಾ ಡಿಸೋಜ, ನಳಿನಿ ಗಣೇಶ್, ಉದಯಶಂಕರ್, ಬಿ.ಸಿ. ವೆಂಕಟೇಶ್, ಸಂಜೀವ, ಶುಭಕರ್, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯ ನಿರೀಕ್ಷಕ ಉದಯಕುಮಾರ್ ಸೇರಿದಂತೆ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.