ಮಡಿಕೇರಿ, ಜೂ. 3: ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಸ್ತುವಾರಿಗಳಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಅವರನ್ನು ನೇಮಕಗೊಳಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಿಟ್ಟು ಚಂಗಪ್ಪ ಅವರು ಪ್ರಸ್ತುತ ಕೆಪಿಸಿಸಿ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಈಗ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಗಳಾಗಿ ಜವಾಬ್ದಾರಿ ಹೊತ್ತಿದ್ದಾರೆ.