ಸೋಮವಾರಪೇಟೆ,ಜೂ.4: ಇಲ್ಲಿನ ಪಟ್ಟಣ ಪಂಚಾಯಿತಿಗೆ ಹಿರಿಯ ಪತ್ರಕರ್ತ ಎಸ್.ಮಹೇಶ್ ಸೇರಿದಂತೆ ಮೂವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಸದಸ್ಯರು ಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.ಮಹೇಶ್ ಅವರೊಂದಿಗೆ ಬಿಜೆಪಿಯ ನಗರಾಧ್ಯಕ್ಷ ಎಸ್.ಆರ್.ಸೋಮೇಶ್ ಹಾಗೂ ಯುವ ಮೋರ್ಚಾದ ವಿ.ಸಿ. ಶರತ್‍ಚಂದ್ರ ಅವರುಗಳನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎ. ವಿಜಯ ಕುಮಾರ್ ಅವರು ತಾ.4ರಂದು ಆದೇಶ ಹೊರಡಿಸಿದ್ದಾರೆ.

ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯತ್‍ಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಾಜಿ

(ಮೊದಲ ಪುಟದಿಂದ) ಸದಸ್ಯರಾದ ಎಂ.ವಿ.ನಾರಾಯಣ, ಎನ್.ಎನ್.ಶಂಭುಲಿಂಗಪ್ಪ, ನಗರ ಬಿಜೆಪಿ ಅಧ್ಯಕ್ಷ ಕೆ.ಜಿ.ಮನು ಅವರುಗಳನ್ನು ಕರ್ನಾಟಕ ಪುರಸಭೆ ಕಾಯ್ದೆಯನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಕುಶಾಲನಗರ ಪಟ್ಟಣ ಪಂಚಾಯ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.