ಮಡಿಕೇರಿ, ಜೂ.5: ಚೆಟ್ಟಳ್ಳಿ, ಕತ್ತಲೆಕಾಡು ರಸ್ತೆ ಬದಿ ಕೇಬಲ್ ಅಳವಡಿಸಲು ತೋಡಲಾಗಿದ್ದ ಚರಂಡಿಯನ್ನು ಮುಚ್ಚದ ಕಾರಣ ಮಳೆ ನೀರು ನಿಂತು ರಸ್ತೆ ಕುಸಿಯುವ ಹಂತಕ್ಕೆ ತಲುಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸೋನಿಯ ಗಾಂಧಿ ಬ್ರಿಗೇಡ್‍ನ ಜಿಲ್ಲಾಧ್ಯಕ್ಷ ಪಿ.ವಿ.ಜಾನ್ಸನ್, ಸಂಬಂಧಪಟ್ಟ ಇಲಾಖಾಧಿಕಾರಿಗಳು ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಲು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕೇಬಲ್ ಅಳವಡಿಕೆಯಿಂದ ರಸ್ತೆ ಹದಗೆಟ್ಟಿರುವ ಬಗ್ಗೆ ಮಾಹಿತಿ ಇದ್ದರೂ ಮೌನಕ್ಕೆ ಶರಣಾಗಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳಬೇಕು ಮತ್ತು ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕು ಎಂದು ಜಾನ್ಸನ್ ಒತ್ತಾಯಿಸಿದ್ದಾರೆ.